Call Us :
+91 96860 00046
+91 9108043552
info@shakthi.edu.in

ಶಕ್ತಿ ವಿದ್ಯಾಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸೂರಜ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ರುಪ್ಸಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಆದ ಡಾ. ಮಂಜುನಾಥ್ ರೇವಣ್ಕರ್ ನೇರವೇರಿಸಿ, ಡಾ. ಅಂಬೇಡ್ಕರ್ ಮತ್ತು ಡಾ.ರಾಜೇಂದ್ರ ಪ್ರಸಾದ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ ನಮ್ಮ ತಾಯ್ನಾಡು. ನಮ್ಮನ್ನು ಹೆತ್ತ ತಾಯಿ ಬೇರೆ ಬೇರೆಯಾಗಿದ್ದರೂ ನಮ್ಮೆಲ್ಲರನ್ನು ಹೊತ್ತು ಬೆಳೆಸುವ ತಾಯಿ ಈ ಭಾರತ ಮಾತೆ. ಈ ದೇಶದ ಒಳಿತಿಗಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಂದು ಮಗುವಿನಲ್ಲೂ ಒಂದು ಶಕ್ತಿ ಇದೆ. ಒಂದಲ್ಲ ಒಂದು ರೀತಿಯಲ್ಲಿ ಅದು ಅವನ ವ್ಯಕ್ತಿತ್ವದಲ್ಲಿ ತೋರುತ್ತದೆ. ಆ ಶಕ್ತಿಯೇ ಅವರನ್ನು ಮುಂದಕ್ಕೆ ಸಮಾಜದಲ್ಲಿ ಒಂದು ಸ್ಥಾನವನ್ನು ಗಳಿಸಲು ಪ್ರೇರೇಪಿಸುತ್ತದೆ ಎಂದರು. ಈ ಸಂದರ್ಭದಲ್ಲಿ SGFI ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌ ವಹಿಸಿದರು. ಕಾರ್ಯಕ್ರಮದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಬಬಿತಾ ಸೂರಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಿಯಾಂಕ ರೈ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Announcements

10th Model Question Paper Download
Date : Monday, January 13th, 2020

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...

Photo Gallery